Tuesday, March 27, 2012

ಪರ್ಕಳದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ


ಉಡುಪಿ, ಮಾ.25: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ, ಹಿರೇಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪರ್ಕಳ ಜೇಸಿಐ ಸಹಭಾಗಿತ್ವದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಮತ್ತು ವಿಶ್ವ ಮಹಿಳಾ ದಿನಾಚರಣೆಯನ್ನು ರವಿವಾರ ಪರ್ಕಳ ಶ್ರೀನಾರಾಯಣ ಗುರು ಸಭಾಭವನದಲ್ಲಿ ಆಯೋಜಿಸಲಾಗಿತ್ತು.

ಹಿರೇಬೆಟ್ಟು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮೀ, ಕ್ಷಯ ರೋಗ, ಅದರ ಬಗ್ಗೆ ಮುಂಜಾಗ್ರತಾ ಕ್ರಮ ಹಾಗೂ ಆರೋಗ್ಯ ಕುರಿತು ಮಾಹಿತಿ ನೀಡಿದರು. ಉಡುಪಿ ಜಿಲ್ಲಾ ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಮಂಜುನಾಥ, ರೋಗದ ಬಗ್ಗೆ ಎಚ್ಚರ ವಹಿಸುವಂತೆ ತಿಳಿಹೇಳಿದರು.

ವಿಶ್ವ ಮಹಿಳಾ ದಿನದ ಅಂಗವಾಗಿ ಜೇಸಿಯ ವಲಯ ತರಬೇತುಧಾರೆ ಶಿಲ್ಪಾಜೋಶಿ ಮಹಿಳಾ ಅಸ್ತಿತ್ವದ ಬಗ್ಗೆ ತರಬೇತಿ ನೀಡಿದರು. ಪರ್ಕಳ ಜೇಸೀ ಅಧ್ಯಕ್ಷ ಮನೋಜ್ ಕಡಬ ಅಧ್ಯಕ್ಷತೆ ವಹಿಸಿದ್ದರು. ಜೇಸಿಐ ವಲಯ ಕಾರ್ಯ ದರ್ಶಿ ಸಂದೀಪ್ ಕುಮರ್, ವಲಯಾಧಿಕಾರಿ ಸುಧೀರ್ ಕುಮಾರ್, ಉಡುಪಿ ಜಿಲ್ಲಾ ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಮಂಜುನಾಥ್, ಗಿರೀಶ್, ಹಿರಿಯ ಆರೋಗ್ಯ ಸಹಾಯಕ ಆನಂದ ಗೌಡ ಉಪಸ್ಥಿತರಿದ್ದರು.

No comments:

Post a Comment